ಮೈಸೂರು ಜಿಲ್ಲಾಧಿಕಾರಿಗಳ ಪಾರಂಪರಿಕ ಕಟ್ಟಡ ನಿವಾಸದಲ್ಲಿ ಈಜುಕೊಳ ನಿರ್ಮಾಣ: ನಿಯಮ ಉಲ್ಲಂಘನೆ ಬಗ್ಗೆ ವಾರದಲ್ಲಿ ವರದಿ

1894 ರಲ್ಲಿ ನಿರ್ಮಿಸಲಾದ ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯ ಪ್ರಶಾಂತ ವಿಲ್ಲಾ ಈಗ ವಿವಾದದ ತಾಣವಾಗಿ ಮಾರ್ಪಟ್ಟಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on

ಮೈಸೂರು: 1894 ರಲ್ಲಿ ನಿರ್ಮಿಸಲಾದ ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯ ಪ್ರಶಾಂತ ವಿಲ್ಲಾ ಈಗ ವಿವಾದದ ತಾಣವಾಗಿ ಮಾರ್ಪಟ್ಟಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಲಸನ್ನಿಧಿ ಆವರಣದಲ್ಲಿ ಒಳಾಂಗಣ ಈಜುಕೊಳ ಮತ್ತು ಖಾಸಗಿ ಜಿಮ್ ನಿರ್ಮಿಸಿದ ತಿಂಗಳುಗಳ ನಂತರ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ತನಿಖೆ ನಡೆಸಿ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ. 

ಜೆಡಿಎಸ್ ಶಾಸಕ ಸಾರಾ ಮಹೇಶ್  ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣದ ಬಗ್ಗೆ ಮಾತನಾಡಿದ್ದರು, ಈ ಹಿನ್ನೆಲೆಯಲ್ಲಿ ಮೇ 31 ರಂದು ತನಿಖೆಗೆ ಆದೇಶ ಹೊರಡಿಸಲಾಗಿದೆ.  

ಮುಂದಿನ ದಿನಗಳಲ್ಲಿ ಪ್ರಾದೇಶಿಕ ಆಯುಕ್ತರು ಈಜುಕೊಳ ನಿರ್ಮಾಣವನ್ನು ಪರಿಶೀಲಿಸಲಿದ್ದಾರೆ,ಈ ಸಂಬಂಧ ಇದುವರೆಗೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com