ಮೈಸೂರು: 1894 ರಲ್ಲಿ ನಿರ್ಮಿಸಲಾದ ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯ ಪ್ರಶಾಂತ ವಿಲ್ಲಾ ಈಗ ವಿವಾದದ ತಾಣವಾಗಿ ಮಾರ್ಪಟ್ಟಿದೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಲಸನ್ನಿಧಿ ಆವರಣದಲ್ಲಿ ಒಳಾಂಗಣ ಈಜುಕೊಳ ಮತ್ತು ಖಾಸಗಿ ಜಿಮ್ ನಿರ್ಮಿಸಿದ ತಿಂಗಳುಗಳ ನಂತರ ಚರ್ಚೆಗೆ ಕಾರಣವಾಗಿದೆ.
ಈ ಸಂಬಂಧ ತನಿಖೆ ನಡೆಸಿ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ.
ಜೆಡಿಎಸ್ ಶಾಸಕ ಸಾರಾ ಮಹೇಶ್ ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣದ ಬಗ್ಗೆ ಮಾತನಾಡಿದ್ದರು, ಈ ಹಿನ್ನೆಲೆಯಲ್ಲಿ ಮೇ 31 ರಂದು ತನಿಖೆಗೆ ಆದೇಶ ಹೊರಡಿಸಲಾಗಿದೆ.
ಮುಂದಿನ ದಿನಗಳಲ್ಲಿ ಪ್ರಾದೇಶಿಕ ಆಯುಕ್ತರು ಈಜುಕೊಳ ನಿರ್ಮಾಣವನ್ನು ಪರಿಶೀಲಿಸಲಿದ್ದಾರೆ,ಈ ಸಂಬಂಧ ಇದುವರೆಗೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement