ವರ್ಗಾವಣೆ ಆದೇಶ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ, ಸಿಎಂ ಮನವರಿಕೆಗೆ ಯತ್ನ 

ತಮ್ಮ ವರ್ಗಾವಣೆ ಆದೇಶ ಹೊರಬಿದ್ದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on

ಬೆಂಗಳೂರು: ತಮ್ಮ ವರ್ಗಾವಣೆ ಆದೇಶ ಹೊರಬಿದ್ದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಅವರ ಅಧಿಕೃತ ನಿವಾಸ ಕಾವೇರಿಗೆ ಇಂದು ಬೆಳ್ಳಂಬೆಳಗ್ಗೆ ಬಂದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ಈ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಲು ಪ್ರಯತ್ನ ಮಾಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದರು.

ಆದರೆ ಯಾವುದೇ ಕಾರಣಕ್ಕೂ ವರ್ಗಾವಣೆ ತಡೆಹಿಡಿಯಲಿಕ್ಕೆ ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಒಮ್ಮೆ ವರ್ಗಾವಣೆ ಆದೇಶ ಹೊರಡಿಸಿದ ಬಳಿಕ ಅದನ್ನು ಹಿಂಪಡೆಯಲು ಆಗುವುದಿಲ್ಲ. ಹೀಗಾಗಿ ಹೊಸ ಇಲಾಖೆಗೆ ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳುವಂತೆ ಹೇಳಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com