ಬೆಂಗಳೂರು: ಲಾಕ್ ​ಡೌನ್​ನಲ್ಲಿ ಹಣ ಮಾಡಲು ದ್ವಿಚಕ್ರ ವಾಹನ ಕದಿಯುತ್ತಿದ್ದ ಮೂವರ ಸೆರೆ

ಲಾಕ್ ​ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಾಹನ ಕಳ್ಳರು
ಬಂಧಿತ ವಾಹನ ಕಳ್ಳರು
Updated on

ಬೆಂಗಳೂರು: ಲಾಕ್​ ಡೌನ್​ನಲ್ಲಿ ಹಣಗಳಿಸಲು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೆ.ಜೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಬೀರ್ (20), ರೋಷನ್ (20), ಅಸ್ಟರ್ ಪಾಷಾ (20) ಬಂಧಿತ ಆರೋಪಿಗಳು.

ಬಂಧಿತರಿಂದ 4 ಲಕ್ಷ ರೂ ಮೌಲ್ಯದ ಆರು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಜೆ.ಜೆ ನಗರ, ಕೆಂಗೇರಿ, ಕುಂಬಳಗೋಡು, ಸಿಟಿ ಮಾರ್ಕೇಟ್, ವಿಜಯನಗರ ಸೇರಿ ನಗರದ ವಿವಿಧೆಡೆ ದ್ವಿಚಕ್ರ ವಾಹನ​ ಕದ್ದು ಪರಾರಿಯಾಗುತ್ತಿದ್ದರು. ಘಟನೆಗೆ ಸಂಬಂಧಿಸಿದಂತೆ ಸರಣಿ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ತನಿಖೆ ಚುರುಗೊಳಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com