ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ 9 ವೈದ್ಯರು ಸಾವು: ಡಾ. ಕೆ.ಸುಧಾಕರ್

 ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಡಾ. ಕೆ. ಸುಧಾಕರ್
ಡಾ. ಕೆ. ಸುಧಾಕರ್
Updated on

ಬೆಂಗಳೂರು: ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕದಿಂದ 646 ವೈದ್ಯರು ಮೃತಪಟ್ಟಿದ್ದಾರೆ. ಈ ಪೈಕಿಯಲ್ಲಿ ರಾಜ್ಯದ 9 ವೈದ್ಯರು ಅಸುನೀಗಿರುವುದಾಗಿ ಭಾರತೀಯ ವೈದ್ಯಕೀಯ ಸಂಘ ನೀಡಿರುವ ಪಟ್ಟಿಯನ್ನು ಟ್ವಿಟರ್ ನಲ್ಲಿ ಡಾ.ಕೆ.ಸುಧಾಕರ್ ಹಂಚಿಕೊಂಡಿದ್ದಾರೆ.

ಕೋವಿಡ್ ವಾರಿಯರ್ಸ್ ಗಳ ರಕ್ಷಣೆಯಲ್ಲಿ ನಮ್ಮ ಸರ್ಕಾರ ಕೈಗೊಂಡ ಮಹತ್ತರ ಹೆಜ್ಜೆಯಿಂದಾಗಿ ರಾಜ್ಯದಲ್ಲಿನ ವೈದ್ಯರ ಸಾವಿನ ಸಂಖ್ಯೆಯಲ್ಲಿ ಕಡಿಮೆಯಾಗಿರುವುದಾಗಿ ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com