ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಬಂದ ಆಶಾ ಕಾರ್ಯಕರ್ತೆಗೆ ಮಚ್ಚು ತೋರಿಸಿ ಹೆದರಿಸಿದ ವ್ಯಕ್ತಿ!

ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.
ವ್ಯಕ್ತಿಯಿಂದ ಮಚ್ಚು ಕಿತ್ತುಕೊಂಡು ಬಿಸಾಕಿದ ಅಜ್ಜಿ
ವ್ಯಕ್ತಿಯಿಂದ ಮಚ್ಚು ಕಿತ್ತುಕೊಂಡು ಬಿಸಾಕಿದ ಅಜ್ಜಿ
Updated on

ಚಾಮರಾಜನಗರ: ಕೊರೋನಾ ಲಸಿಕೆ ಬಗ್ಗೆ ಇರುವ ಹಲವು ತಪ್ಪು ಕಲ್ಪನೆಗಳು, ವದಂತಿಗಳನ್ನು ನಂಬುವ ಕೆಲವು ಜನರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದನ್ನು ಕೇಳಿದ್ದೇವೆ. ಅಂತವರ ಮನವೊಲಿಸಲು ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಅವರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ.

ಹೀಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಲು ಹೋದ ಆಶಾ ಕಾರ್ಯಕರ್ತೆಗೆ ವ್ಯಕ್ತಿಯೋರ್ವ ಮಚ್ಚಿನಿಂದ ಹೊಡೆಯಲು ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬರ್ಗಿ ಕಾಲೊನಿಯಲ್ಲಿ ನಡೆದಿದೆ.

ಈ ಸಂದರ್ಭದಲ್ಲಿ ಅಜ್ಜಿಯೊಬ್ಬರು ವ್ಯಕ್ತಿಯಿಂದ ಮಚ್ಚನ್ನು ಕಿತ್ತು ಬಿಸಾಕಿ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com