ಕೋವಿಡ್ ಸೆಸ್: 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ಬೊಮ್ಮಾಯಿ ಸಭೆ

ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.
ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ಕೋವಿಡ್ ಸೆಸ್ ಸಂಗ್ರಹಿಸುವಂತೆ ಸಿಕ್ಕಿಂ ರಾಜ್ಯ ಸಲಹೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 7 ರಾಜ್ಯಗಳ ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತುಕತೆ ನಡೆಸಿದರು.

ಸಾಂಕ್ರಾಮಿಕ ರೋಗದಿಂದಾಗಿ ಸುಮಾರು ಶೇ.30 ನಷ್ಟು ಆದಾಯದ ಕೊರತೆಯನ್ನು ನೀಗಿಸಲು ಸಿಕ್ಕಿಂ ಪ್ರಸ್ತಾಪಿಸಿದ ತೆರಿಗೆ ಹೆಚ್ಚಳ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು

ಸಭೆಯಲ್ಲಿ ದೆಹಲಿ, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಕರ್ನಾಟಕ, ಒಡಿಶ್ಸಾ ಮತ್ತು ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳ ಹಣಕಾಸು ಸಚಿವರು ಸಿಕ್ಕಿಂ ರಾಜ್ಯದೊಳಗಿನ ಔಷಧ ಮತ್ತು ವಿದ್ಯುತ್ ಮೇಲಿನ ತೆರಿಗೆಯನ್ನು ಹೆಚ್ಚಿಸುವ ಪ್ರಸ್ತಾಪದ ಬಗ್ಗೆ ಚರ್ಚೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com