ಬಿ.ಎಸ್. ಯಡಿಯೂರಪ್ಪ ನಿವೃತ್ತಿ ಪಡೆಯುವ ಸಮಯ ಬಂದಿದೆ: ಲಿಂಗಾಯತ ಶ್ರೀ

ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ. 

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ಶ್ರೀಗಳು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದ್ದರು. 

ಕೇಂದ್ರ ನಾಯಕತ್ವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕಿಳಿಸಿದರೆ, ಪಕ್ಷವನ್ನು ಹೃದಯಾಳದಿಂದ ಸ್ವಾಗತಿಸುತ್ತೇವೆ. ಯಡಿಯೂರಪ್ಪ ಅವರ ವಯಸ್ಸಿನಿಂದಾಗಿ ಹಲವರಿಗೆ ಅಧಿಕಾರ ತಪ್ಪಿ ಹೋಗುತ್ತಿದೆ. ಹೀಗಾಗಿ ಅವರು ನಿವೃತ್ತಿ ಪಡೆದುಕೊಳ್ಳಲು ಸಮಯ ಬಂದಿದೆ ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿದ್ದಾರೆ. ಸಮುದಾಯದ ಬೆಂಬಲವನ್ನು ಪಡೆದುಕೊಂಡಿದ್ದರು. ಆದರೆ, ಜನರ ಸಾಲವನ್ನು ಮರುಪಾವತಿ ಮಾಡುತ್ತಿಲ್ಲ. ನಾಯಕತ್ವ ಕಸಿದುಕೊಳ್ಳುವ ಸಾಮರ್ಥ್ಯವಿರುವ ಪಂಚಮಸಾಲಿ ಸಮುದಾಯವನ್ನೇ ಒಡೆಯಲು ಯಡಿಯೂರಪ್ಪ ಅವರು ಯತ್ನಿಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com