ಕೌಟುಂಬಿಕ ಕಲಹ: ಬಳ್ಳಾರಿಯಲ್ಲಿ ಮಕ್ಕಳಿಬ್ಬರ ಉಸಿರು ನಿಲ್ಲಿಸಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಳ್ಳಾರಿ: ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.

ಮೃತರನ್ನು ಬಳ್ಳಾರಿ ಇಂದಿರಾ ನಗರದ ಏಳನೇ ಅಡ್ಡರಸ್ತೆಯ ನಿವಾಸಿ ಸಿದ್ದಪ್ಪನವರ ಪತ್ನಿ ಸುನೀತಾ (25) ಮತ್ತು ಆಕೆಯ  2 ವರ್ಷದ ಮಗ ಹಾಗೂ 10 ತಿಂಗಳ‌  ಹೆಣ್ಣು ಮಗುವೆಂದು ಗುರುತಿಸಲಾಗಿದೆ.

ಪತಿ ಪತ್ನಿಯರಲ್ಲಿ ಯಾವಾಗಲೂ ಕ್ಷುಲ್ಲಕ ಕಾರಣಗಳಿಗೆ ಜಗಳವಾಗುತ್ತಿತ್ತು. ನಿನ್ನೆ ಸಹ ಸಣ್ಣ ವಿಚಾರಕ್ಕೆ ಮನಸ್ತಾಪವಾಗಿತ್ತು. ಇದರಿಂದ ಬೇಸರಗೊಂಡ ಸುನೀತಾ ಮನೆಯ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್​ ನಲ್ಲಿ ತನ್ನಿಬ್ಬರು ಮಕ್ಕಳನ್ನು ಮುಳುಗಿಸಿ ಕೊಂದು ಬಳಿಕತಾನೂ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com