4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಶೌಚಗುಂಡಿಯಲ್ಲಿ ಪತ್ತೆ

ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಮನೆಯ ಹಿಂಭಾಗದ ಶೌಚಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಗುಂಡಿಮಾಳ ಗ್ರಾಮದಲ್ಲಿ ಜರುಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹನೂರು: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಮನೆಯ ಹಿಂಭಾಗದ ಶೌಚಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಗುಂಡಿಮಾಳ ಗ್ರಾಮದಲ್ಲಿ ಜರುಗಿದೆ.

ಹನೂರು ತಾಲೂಕು ವ್ಯಾಪ್ತಿಯ ಗುಂಡಿಮಾಳ ಗ್ರಾಮದ ರಾಜಶೇಖರಮೂರ್ತಿ ಎಂಬಾತ ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಈತನ ಶವ ಅವರ ಮನೆಯ ಹಿಂಭಾಗದ ಶೌಚಾಲಯದ ಗುಂಡಿಯಲ್ಲಿ ಪತ್ತೆಯಾಗಿದೆ. 

ಗುಂಡಿಮಾಳ ಗ್ರಾಮದ ರಾಜಶೇಖರಮೂರ್ತಿ ಜೂನ್ 24ರಿಂದ ಕಾಣೆಯಾಗಿದ್ದಾನೆ ಎಂಬುದಾಗಿ ಜೂನ್ 26ರಂದು ಆತನ ತಂದೆ ಮಹಾದೇವಸ್ವಾಮಿ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ಗ್ರಾಮದಲ್ಲಿ ರಾಜಶೇಖರಮೂರ್ತಿಯ ಕೊಲೆಯಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದ್ದವು. ಇದಕ್ಕೆ ಇಂಬು ನೀಡುವಂತೆ ಅವರ ಮನೆಯ ಹಿಂಬಾಗದ ಶೌಚಗೃಹದಿಂದ ದುರ್ವಾಸನೆ ಬರಲು ಪ್ರಾರಂಭಿಸಿತ್ತು. ಈ ವೇಳೆಗೆ ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಕೂಡಲೇ ಹನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಹನೂರು ಸಿಪಿಐ ಸಂತೋಷ್ ಕಶ್ಯಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಗುಂಡಿಯನ್ನು ತೆಗೆಸಿ ನೋಡಿದಾಗ ರಾಜಶೇಖರಮೂರ್ತಿಯ ಶವ ದೊರೆತಿದೆ. ಕೂಡಲೇ ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪೇದೆಗಳಾದ ರಾಘವೇಂದ್ರ, ಬಿಳಿಗೌಡ, ರಾಮಶೆಟ್ಟಿ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com