ಧಾರವಾಡ: ಮದುವೆಯಾಗಿ ಮಾರನೇ ದಿನವೇ ಮಾವನ ಮನೆಯಲ್ಲಿ ಮೃತಪಟ್ಟ ಮದುಮಗ!

ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. 

28 ವರ್ಷದ ಶಶಿಕರುಮಾರ್ ಪಟ್ಟಣಶೆಟ್ಟಿ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಜ್ವರದ ನಡುವೆ ನಿನ್ನೆ ಮದುವೆ ಮಾಡಿಕೊಂಡಿದ್ದರು. ಇಂದು ಮಾವನ ಮನೆಗೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 

ಶಶಿಕುಮಾರ್ ನಿಧನದಿಂದಾಗಿ ಎರಡೂ ಕುಟುಂಬಗಳಲ್ಲಿ ನೀರವ ಮೌನ ಆವರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com