ರಾಜ್ಯದಲ್ಲಿ ಮತ್ತೊಂದು ದುರಂತ: ಆಕ್ಸಿಜನ್ ಕೊರತೆಯಿಂದ ಹುಬ್ಬಳ್ಳಿಯಲ್ಲಿ 5 ಮಂದಿ ಕೊರೋನಾ ರೋಗಿಗಳ ಸಾವು!

ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹುಬ್ಬಳ್ಳಿ: ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 

ಹುಬ್ಬಳ್ಳಿಯ ಲೈಫ್'ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೇರಿದಂತೆ ಐವರು ಸೋಂಕಿತರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಮೃತಪಟ್ಟವರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ನಿರಾಕರಿಸಿದ್ದಾರೆ. 

 ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವೇ ಇದೆ. ಘಟನೆ ಕುರಿತು ತಜ್ಞರ ಸಮಿತಿ ತನಿಖೆ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಂಶಗಳು ಬಹಿರಂಗಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com