ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಹಿಂದೆ ಈ ನಾಲ್ಕು ರಾಜ್ಯಗಳಿಂದ ಆಗಮಿಸುವವರು ರಾಜ್ಯಕ್ಕೆ ಆಗಮಿಸುವಾಗ 72 ಗಂಟೆಗಿಂತ ಹಳೆಯದಲ್ಲದ ಕೊರೋನಾ ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಲಾಗಿತ್ತು. ಈ ನಿಯಮವನ್ನು ಸಡಿಲಿಸುತ್ತಿದ್ದು, ಪ್ರತಿಯೊಬ್ಬರೂ ಆರ್'ಟಿಪಿಸಿಆರ್ ನೆಗೆಟಿವ್ ವರದಿ ತರುವ ಅಗತ್ಯವಿಲ್ಲ. 

ಆದರೆ, ರೋಗ ಲಕ್ಷಣಗಳುಳ್ಳವರು ಮಾತ್ರ ನೆಗೆಟಿವ್ ವರದಿ ತರಬೇಕು. ವಿಮಾನ ನಿಲ್ದಾಣದ ಸಿಬ್ಬಂದಿ ಇದನ್ನು ಪರಿಶೀಲನೆ ನಡೆಸಬೇಕು. ಈ ಮೂಲಕ ರೋಗ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com