ಉಡುಪಿ: ಮೊಬೈಲ್ ಗೇಮ್ ಆಡಬೇಡವೆಂದು ಬುದ್ದಿ ಹೇಳಿದ್ದಕ್ಕೆ 16 ವರ್ಷದ ಬಾಲಕಿ ಆತ್ಮಹತ್ಯೆ!

ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಪು: ಮೊಬೈಲ್ ಗೇಮಿಂಗ್ ಚಟ ಯುವಕ/ಯುವತಿಯರರ ಜೀವನವನ್ನು ಹೇಗೆ ಆಕ್ರಮಿಸಿಕೊಂಡಿದೆ ಎಂಬುದನ್ನು ಎತ್ತಿ ತೋರಿಸುವ ಘಟನೆಯೊಂದು ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. 16 ವರ್ಷದ ಬಾಲಕಿಯೊಬ್ಬಳು ಆಕೆ ಮೊಬೈಲ್ ಫೋನ್‌ನಲ್ಲಿ ವಿಡಿಯೋ ಗೇಮ್‌ಗಳನ್ನು ಆಡಿದ್ದಕ್ಕಾಗಿ ಪೋಷಕರು ನಿಂದಿಸಿದರೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೇ  15 ರ ಸಂಜೆ ಕಾಪು ತಾಲೂಕಿನ ಮಣಿಪುರ ಗ್ರಾಮದ ಮಣಿಪುರ ಕೋಟೆಯಲ್ಲಿ ನಡೆದಿದೆ.

ಮೃತಳನ್ನು ಜುಬೇರಾ ಹಾಗೂ ಶಬಾನು ಅವರ ಪುತ್ರಿ ಸುಹೀಬತ್ ಅಸ್ಲಮಿಯಾ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ್ದ ದೂರಿನನ್ವಯ ಬಾಲಕಿ ನಿರಂತರವಾಗಿ ಮೊಬೈಲ್ ಫೋನ್‌ನಲ್ಲಿ ಗೇಮ್ ಆಡುವುದರಲ್ಲಿ ತಲ್ಲೀನಳಾಗಿರುತ್ತಿದ್ದಳು. ಹಾಗೆ ಮಾಡಬೇಡ ಎಂದರೂ ಕೇಳುತ್ತಿರಲಿಲ್ಲ. ಮೇ 15 ರ ಸಂಜೆ ಬಾಲಕಿಗೆ ದೂರುದಾರರಾದ ಜುಬೇದಾ ಹಾಗೂ ಆತನ ಪತ್ನಿ  ಮೊಬೈಲ್‌ನಲ್ಲಿ ಆಟವಾಡುವುದನ್ನು ನಿಲ್ಲಿಸುವಂತೆ ಸಲಹೆ ನೀಡಿದರು ಮತ್ತು ಅವಳಿಂದ ಮೊಬೈಲ್ ಅನ್ನು ಕಸಿದುಕೊಂಡಿದ್ದಾರೆ. ಅದಾದ ನಂತರ ಬಾಲಕಿ ಮನೆಯ ಒಂದು ಮೂಲೆಯಲ್ಲಿ ಕುಳಿತಿದ್ದಳು.

ಆಗ ತಾಯಿ ನಮಾಜ್ ಮಾಡಲು ಹೋದರೆ ತಂದೆ ಸ್ನಾನಕ್ಕೆ ತೆರಳಿದ್ದರು. ನಮಾಜ್ ನಂತರ ತಾಯಿ ಆಗಮಿಸಿದಾಗ ಮಗಳು ಅಲ್ಲಿರಲಿಲ್ಲ.

ಅವಳನ್ನು ಹುಡುಕತೊಡಗಿದಾಗ ತಮ್ಮ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಸರ್ಕಾರಿ ಬಾವಿಯ ಸಮೀಪ ಜನ ಸೇರಿರುವುದನ್ನು ಕಂಡಿದ್ದಾರೆ. ಆಗ ಅವರಿಗೆ ತಮ್ಮ ಮಗಳು ಬಾವಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಮುಂದಾಗಿದ್ದಾಳೆ ಎನ್ನುವುದು ಗೊತ್ತಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಸ್ಲಮಿಯಾಳನ್ನು ಬಾವಿಯಿಂದ ಎತ್ತುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com