ಹಾಸನ: ರೈಲಿಗೆ ಸಿಲುಕಿ 30 ವರ್ಷದ ಕಾಡಾನೆ ಸಾವು

ಒಂಟಿ ಸಲಗವೊಂದು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟ ಆನೆ
ಮೃತಪಟ್ಟ ಆನೆ

ಹಾಸನ: ಒಂಟಿ ಸಲಗವೊಂದು ರೈಲಿಗೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.

ಬೆಂಗಳೂರಿನಿಂದ ಕಾರವಾರಕ್ಕೆ ಹೋಗುತ್ತಿದ್ದ ಬೆಂಗಳೂರು-ಕಾರವಾರ ಎಕ್ಸ್​ಪ್ರೆಸ್ ರಾತ್ರಿ 12ರ ಸುಮಾರಿಗೆ ಹಸಡೆ ಬಳಿಯಿಂದ ಸಾಗುತ್ತದೆ. ಈ ವೇಳೆ ಅಡ್ಡ ಬಂದ ಆನೆಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಈ ದುಘರ್ಟನೆ ಸಂಭವಿಸಿದೆ.

ಗುಂಪಿನಿಂದ ಬೇರ್ಪಟಿದ್ದ 30 ವರ್ಷದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ಆ ಆನೆಯೇ ಇದಾಗಿರಬಹುದು ಎಂದು ಶಂಕಿಸಲಾಗಿದೆ.

ರೈಲ್ವೆ ಪೊಲೀಸರು ಮತ್ತು ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅರ್ಧ ಘಂಟೆಯ ನಂತರ ಗ್ರಾಮಸ್ಥರ ಸಹಾಯದಿಂದ ಆನೆಯ ಮೃತದೇಹವನ್ನು ಸ್ಥಳಾಂತರಿಸಿ ಟ್ರ್ಯಾಕ್ ತೆರವುಗೊಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com