ಲಾಕ್ ಡೌನ್ ವಿಸ್ತರಣೆ ಕುರಿತು ಮೇ 23ಕ್ಕೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ

ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ಈಗಾಗಲೇ ಹೇರಿರುವ ಲಾಕ್ ಡೌನ್ ನಿಂದ ಯಾವ ಮಟ್ಟಿಗೆ ಬೆಂಗಳೂರು ನಗರ ಸೇರಿದಂತೆ ಜಿಲ್ಲೆಗಳಲ್ಲಿ ಪರಿಣಾಮ ಬೀರಿದೆ, ಮುಂದೆ ಏನು ಅಗತ್ಯ ಕ್ರಮಗಳನ್ನು ತೆಗೆದುಕೊಂಡರೆ ಉತ್ತಮ ಎಂದು ಸಚಿವರು, ಅಧಿಕಾರಿಗಳೊಂದಿಗೆ 23ರಂದು ಸಭೆ ನಡೆಸಿ ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

ಈಗ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರದ ಇತಿಮಿತಿಯಲ್ಲಿ ಆರ್ಥಿಕ ಪರಿಹಾರ ಪ್ಯಾಕೇಜ್ ಗಳನ್ನು ಘೋಷಣೆ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ ಎಂದರು.

ಕೋವಿಡ್ ನಿಂದ ಪೋಷಕರಿಬ್ಬರೂ ಮೃತಪಟ್ಟು ಅನಾಥರಾಗಿರುವ ಮಕ್ಕಳ ಆರೈಕೆಗೆ ವಿಶೇಷ ಪ್ಯಾಕೇಜ್ ಗಳನ್ನು ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಹ ಮುಖ್ಯಮಂತ್ರಿ ಇಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com