ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.
ತೆಂಗಿನ ಸಸಿ ನೆಟ್ಟ ದೇವೇಗೌಡ ದಂಪತಿ
ತೆಂಗಿನ ಸಸಿ ನೆಟ್ಟ ದೇವೇಗೌಡ ದಂಪತಿ
Updated on

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ಹಸಿರಿನಿಂದ ಕಂಗೊಳಿಸುತ್ತಾ, ಸಂಭ್ರಮಿಸುತ್ತಿರುವ ತೋಟವನ್ನು ಕಂಡು 'ರೈತನ ಮಗ' ದೇವೇಗೌಡರು ಅಷ್ಟೇ ಸಂಭ್ರಮಪಟ್ಟರು ಎಂದಿದ್ದಾರೆ.

ದಂಪತಿ ಈ ಶುಭ ದಿನ ನನ್ನ ಪ್ರೀತಿಯ ತೋಟಕ್ಕೆ ಆಗಮಿಸಿ, ಕಲ್ಪವೃಕ್ಷವಾದ ತೆಂಗಿನ ಸಸಿ ನೆಟ್ಟಿದ್ದು ಅವರ ಮಗನಾದ ನನ್ನನ್ನು ಭಾವಪರವಶನಾಗುವಂತೆ ಮಾಡಿತು. ಈ ಅಪರೂಪದ ಸನ್ನಿವೇಶ ಸೃಷ್ಟಿಸಿದ ದೇವರಿಗೆ ನನ್ನ ನಮನಗಳು. ದೇವೇಗೌಡ ದಂಪತಿಗೆ ಶುಭಾಶಯಗಳು ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com