ಮತ್ತೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮನೀಶ್ ಮೌದ್ಗೀಲ್ ಎಚ್ಚರಿಕೆ

ಮೇ 24 ಮತ್ತು 24 ರಂದು ರಾಜ್ಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗಿಲ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೇ 24 ಮತ್ತು 24 ರಂದು ರಾಜ್ಯದಲ್ಲಿ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗಿಲ್ ಹೇಳಿದ್ದಾರೆ.

ಬಳ್ಳಾರಿ ಘಟಕದಲ್ಲಿ ಉತ್ಪಾದನೆಯಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗಾಗಿ ಮತ್ತು ಬಿಬಿಎಂಪಿ ಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೂಚಿಸಿದ್ದಾರೆ.

ಬಳ್ಳಾರಿ ಘಟಕದಲ್ಲಿ 220 ಟನ್ ಆಮ್ಲಜನಕ ಉತ್ಪಾದನೆಯಲ್ಲಿ ಕೊರತೆ ಉಂಟಾಗಿದೆ. ಬುಧವಾರ ಬೆಳಗ್ಗೆ ಇದು ಸರಿಯಾಗುವ ಸಾಧ್ಯತೆಯಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಿಗೆ ಶೇ.20 ರಷ್ಟು ಆಮ್ಲಜನಕ ಪೂರೈಕೆ ಕಡಿಮೆಯಾಗಲಿದೆ, ಆಕ್ಸಿಜನ್ ಬಳಕೆಯಲ್ಲಿ ಎಚ್ಚರಿಕೆಯಿರಬೇಕು ಎಂದು ಆಸ್ಪತ್ರೆಗಳಿಗೆ ತಿಳಿಸಿದ್ದಾರೆ.

ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಬಳಿ ಇರುವ ಜಿಂದಾಲ್ ಕಂಪನಿಯಲ್ಲಿ ತಾಂತ್ರಿಕ ದೋಷದಿಂದಾಗಿ ಆಕ್ಸಿಜನ್ ಉತ್ಪಾದನೆ ಸ್ಥಗಿತಗೊಂಡಿದೆ. 4 ಆಕ್ಸಿಜನ್ ಪ್ಲಾಂಟ್ ಪೈಕಿ ಹೇರ್ ವಾಟರ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು ಉಳಿದ ಮೂರು ಪ್ಲಾಂಟ್ಗಳಲ್ಲಿ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. 

ಸರ್ಕಾರಿ ಅಧಿಕಾರಿಗಳ ಪ್ರಕಾರ, ಪ್ರತಿದಿನ 850 ಮೆಟ್ರಿಕ್ ಟನ್ ಆಮ್ಲಜನಕವನ್ನು ರಾಜ್ಯಾದ್ಯಂತ ಆಸ್ಪತ್ರೆಗಳು ಪೂರೈಸುತ್ತಿದ್ದು ಬಳಕೆಯಾಗುತ್ತಿದೆ, ಸೋಮವಾರ ಮತ್ತು ಮಂಗಳವಾರ ಎಲ್ಲಾ ಮರುಪೂರಣಕಾರರಿಗೆ ಸರಬರಾಜು ಶೇಕಡಾ 20 ರಷ್ಟು ಕಡಿತಕ್ಕೆ ಸಿದ್ಧರಾಗಿರಲು ಮೌದ್ಗಿಲ್ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಆಸ್ಪತ್ರೆಗಳನ್ನು ತಿಳಿಸಿದ್ದಾರೆ. 

ಆಮ್ಲಜನಕವನ್ನು ಬುದ್ಧಿವಂತಿಕೆಯಿಂದ ಬಳಕೆ ಮಾಡಲು ಜಿಲ್ಲಾಡಳಿತವು ಆಸ್ಪತ್ರೆಗಳಿಗೆ ಮಾಹಿತಿ ನೀಡಬೇಕು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ದೊಡ್ಡ ದಾಸ್ತಾನುಗಳನ್ನು ಸಂಗ್ರಹಿಸಲು ಸರಿಯಾದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ. ಬುಧವಾರ ಪರಿಸ್ಥಿತಿ ಸರಿಯಾಗಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com