ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಗ್ರಾಮಗಳಿಗೆ ಸರ್ಕಾರದಿಂದ ಉಚಿತ ವಾಹನ ವ್ಯವಸ್ಥೆ

ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಿಂದ ಕೊರೋನಾ ರೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ಗ್ರಾಮಗಳಿಂದ ಕೋವಿಡ್ ಕೇರ್ ಕೇಂದ್ರಗಳಿಗೆ ರೋಗಿಗಳನ್ನು ಕರೆದೊಯ್ಯಲು ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್ ಇಲಾಖೆ ಉಚಿತವಾಗಿ ವಾಹನ ವ್ಯವಸ್ಥೆ ಮಾಡಲಿದೆ. ಖಾಸಗಿ ಸಹಭಾಗಿತ್ವದಲ್ಲಿ ವಾಹನ ಒದಗಿಸಲು ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.

ರಾಜ್ಯದಲ್ಲಿ 6ಸಾವಿರ ಗ್ರಾಮ ಪಂಚಾಯಿತಿಗಳಿದ್ದು, ಮುಂದಿನ ಕೆಲ ತಿಂಗಳುಗಳಲ್ಲಿ ಸ್ಥಳೀಯ ಪಂಚಾಯಿತಿಗಳಿಗೆ ವಾಹನ ವ್ಯವಸ್ಥೆ ಮಾಡಲಾಗುವುದು, ಪಂಚಾಯತ್‌ಗಳು ಅವರಿಗೆ ನೀಡಲಾಗಿದ್ದ 50,000 ರೂಗಳನ್ನು ವಿವಿಧ ವೆಚ್ಚಗಳಿಗಾಗಿ ಬಳಸಿಕೊಳ್ಳಬಹುದು. ಇದಲ್ಲದೆ, ಸ್ಥಳೀಯ ಟಾಸ್ಕ್ ಫೋರ್ಸ್ ಸಮಿತಿಗಳಿಗೆ ಜನರಿಗೆ ಲಸಿಕೆ ಬರುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಲಾಗಿದೆ.

ಐಸಿಯು ಸ್ಥಾಪಿಸುವ ಬಗ್ಗೆಯೂ ರಾಜ್ಯ ಸರ್ಕಾರ ಗಮನಹರಿಸುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 9 ಲಕ್ಷ ಕಿ.ಮೀ ಕ್ರಮಿಸಿರುವ ಬಸ್‌ಗಳನ್ನು ‘ಐಸಿಯು ಆನ್ ವೀಲ್ಸ್’ ಆಗಿ ಪರಿವರ್ತಿಸಿದ್ದು, ಇದು ಆಮ್ಲಜನಕವನ್ನು ಒದಗಿಸುತ್ತದೆ ಮತ್ತು ರೋಗಿಗಳನ್ನು ಮೇಲ್ವಿಚಾರಣೆ ಮಾಡುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಇತರ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಇಂತಹ 100 ಬಸ್‌ಗಳನ್ನು ಅಭಿವೃದ್ಧಿಪಡಿಸಲಿದ್ದು, ಆಸ್ಪತ್ರೆ ವ್ಯವಸ್ಥೆ ಇಲ್ಲದ 100 ಹಿಂದುಳಿದ ಗ್ರಾಮಗಳಿಗೆ ನೀಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com