ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಅವರ ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ಮಾಹಿತಿ ನೀಡಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿರುವ ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದಾರೆ.
Advertisement