ಕೊಪ್ಪಳ: ಹೊಸದಿಗಂತ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾಗಿದ್ದ ತಿಪ್ಪನಗೌಡ ಮಾಲೀಪಾಟೀಲ್(40) ಅವರು ಕೋವಿಡ್ -19 ಸೋಂಕಿನಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಹತ್ತು ದಿನಗಳಿಂದ ನಗರದ ಕೆ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಿಪ್ಪನಗೌಡ ಮಾಲೀಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಹೊಸದಿಗಂತ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ಸಂತಾಪ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಸುರೇಶ, ಇಲಾಖೆಯ ಸಿಬ್ಬಂದಿ ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.
Advertisement