ಮಂಗಳೂರು; ಮಂಗಳೂರಿನ ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನಡೆದಿದೆ.
ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಬಳಿಕ ಅಧಿಕಾರಿಗಳು ಸರಿಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಮಂಗಳೂರು ಸಿಟಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.
Advertisement