ಪುನೀತ್ ರಾಜ್ ಕುಮಾರ್ ಪ್ರೇರಣೆ: ಕುಟುಂಬ ಸದಸ್ಯರ ನೇತ್ರದಾನಕ್ಕೆ ಮುಂದಾದ ಎಂ.ಪಿ. ರೇಣುಕಾಚಾರ್ಯ

ಇತ್ತೀಚಿಗೆ ನಿಧನರಾದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರಿಂದ ಪಡೆದ ಪ್ರೇರಣೆಯಿಂದ ತಮ್ಮ ಕುಟುಂಬದ ಸದಸ್ಯರೆಲ್ಲರ ನೇತ್ರವನ್ನು ಮರಣಾ ನಂತರ ದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.
ಎಂ.ಪಿ. ರೇಣುಕಾಚಾರ್ಯ ಕುಟುಂಬ ಸದಸ್ಯರು
ಎಂ.ಪಿ. ರೇಣುಕಾಚಾರ್ಯ ಕುಟುಂಬ ಸದಸ್ಯರು
Updated on

ಬೆಂಗಳೂರು: ಇತ್ತೀಚಿಗೆ ನಿಧನರಾದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರಿಂದ ಪಡೆದ ಪ್ರೇರಣೆಯಿಂದ ತಮ್ಮ ಕುಟುಂಬದ ಸದಸ್ಯರೆಲ್ಲರ ನೇತ್ರವನ್ನು ಮರಣಾನಂತರ ದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದ ಎಂ.ಪಿ. ರೇಣುಕಾಚಾರ್ಯ, ಅಗಲಿದ ಪುನೀತ್ ಅವರಿಗೆ ಗೌರವ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಪುನೀತ್ ಅವರ ಅಭಿನಯ, ನೃತ್ಯ, ಗಾಯನ ಎಲ್ಲವೂ ತಮಗೆ ಇಷ್ಟ, ಎಲ್ಲಕ್ಕಿಂತ ಹೆಚ್ಚಾಗಿ ಅವರ ನೇತ್ರದಾನ ಮತ್ತಿತರ ಸಮಾಜಮುಖಿ ಕಾರ್ಯಗಳಿಂದ ಪ್ರೇರಿತರಾಗಿದ್ದು, ನಾನು ಸಹ ಮರಣಾನಂತರ ನೇತ್ರದಾನ ಮಾಡಿ ಅಂಧರ ಬಾಳು ಬೆಳಗಿಸುವ ದೃಢ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com