ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಭೇಟಿ ಮಾಡಿದ ಶಾಸಕ, ಮತ್ತೆ ಭರವಸೆ

ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 
ಶಾಸಕ ರಾಮಣ್ಣ ಲಮಾಣಿ
ಶಾಸಕ ರಾಮಣ್ಣ ಲಮಾಣಿ
Updated on

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ  ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. 

ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಸ್ಥಳೀಯ ಸರ್ಕಾರ ಹಾಗೂ ಶಾಸಕರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಆರೋಪಿಸಿ ಲಕ್ಷ್ಮೇಶ್ವರ ಟೌನ್ ನ ಹುಬ್ಬಳ್ಳಿ ರಸ್ತೆಯಲ್ಲಿ 70-80 ಆಸುಪಾಸಿನ ವಯಸ್ಸಿನ ವೃದ್ಧ ಪ್ರತಿಭಟನೆ ನಡೆಸುತ್ತಿದ್ದರು. 

ಇದಕ್ಕೂ ಮುನ್ನ ಭಾನುವಾರ ಸಂಜೆ ಪ್ರತಿಭಟನೆ ನಡೆಸುತ್ತಿದ್ದ ವ್ಯಕ್ತಿಯನ್ನು ಭೇಟಿ ಮಾಡಿದ್ದ ಸ್ಥಳೀಯ ಅಧಿಕಾರಿಗಳು ಪ್ರತಿಭಟನೆ ಅಂತ್ಯಗೊಳಿಸುವಂತೆ ಮನವಿ ಮಾಡಿದ್ದರು. ಈ ಬಳಿಕ ಶಾಸಕರು ತಹಶಿಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಇತರ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಶೀಘ್ರವೇ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

ಫಕೀರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಈಗಲೂ ಸರ್ಕಾರವನ್ನು ನಂಬುತ್ತೇನೆ, ಶಾಸಕರು ನನಗೆ ಸಹಾಯ ಮಾಡುವ ಭರವಸೆ ನೀಡಿದ್ದಾರೆ. ನನ್ನನ್ನು ಭೇಟಿ ಮಾಡಲು ಬಂದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com