ಧರ್ಮಸ್ಥಳ: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ದೇವಾಲಯದಲ್ಲಿ ನೆರವೇರುವ ಲಕ್ಷ ದೀಪೋತ್ಸವ ಈ ವರ್ಷ ನವೆಂಬರ್ 29ರಿಂದ ಡಿಸೆಂಬರ್ 4ರವರೆಗೆ ಕಾರ್ಯಕ್ರಮ ನಡೆಯಲಿದ್ದು ಡಿಸೆಂಬರ್ 3ರಂದು ಲಕ್ಷದೀಪೋತ್ಸವ ನಡೆಯಲಿದೆ.
ಡಿಸೆಂಬರ್ 2ರಂದು ಸಂಜೆ 5ಗಂಟೆಗೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಎಸ್ ವ್ಯಾಸಯೋಗ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದು, ಹಲವು ಪ್ರಮುಖರು ಉಪನ್ಯಾಸ ನೀಡಲಿದ್ದಾರೆ.ಡಿಸೆಂಬರ್ 2 ಮತ್ತು 3ರಂದು ಸರ್ವಧರ್ಮ ಸಾಹಿತ್ಯ ಸಮ್ಮೇಳನ ನೆರವೇರಲಿದೆ.
6 ದಿನಗಳ ಕಾಲವೂ ಪ್ರತಿದಿನ ರಾತ್ರಿ 9 ಗಂಟೆಗೆ ಉತ್ಸವಗಳು ನಡೆಯಲಿದೆ. ಡಿಸೆಂಬರ್ 4ರಂದು ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವ ಮುಕ್ತಾಯವಾಗಲಿದೆ.
Advertisement