ಪ್ರಧಾನಿ ಮೋದಿ
ರಾಜ್ಯ
ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಮಳೆಹಾನಿ ಕುರಿತು ವಿವರ ಪಡೆದ ಪ್ರಧಾನಿ ಮೋದಿ
ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಮಳೆಹಾನಿ ವಿವರ ಪಡೆದಿದ್ದಾರೆಂದು ತಿಳಿದುಬಂದಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿರುವ ಪ್ರಧಾನಿ ಮೋದಿ ಅವರು, ಮಳೆ ಹಾನಿ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪರಿಹಾರ ಸೇರಿ ಎಲ್ಲಾ ರೀತಿಯ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಕರೆ ಮಾಡಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ