ಬೀದರ್: ಕೆರೆಗೆ ಈಜಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಹತ್ತಿರದ ಬಳಿ ಭಾನುವಾರ ಸಂಭವಿಸಿದೆ.
ಮೃತರನ್ನು ಹೈದ್ರಾಬಾದ್ನ ಬೋರಾಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್(19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ಎಂದು ಗುರುತಿಸಲಾಗಿದೆ.
ನಾಲ್ವರ ಪೈಕಿ ಸೈಯದ್ ಅಕ್ಬರ್ ಶವ ಪತ್ತೆಯಾಗಿದ್ದು, ಸ್ಥಳೀಯರ ಸಹಕಾರದಿಂದ ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Advertisement