ಮೈಸೂರು: ಕಾರಿನ ಟೈರ್​ ಬ್ಲಾಸ್ಟ್​ ಆಗಿ ಅಪಘಾತ, ತಾಯಿ, ಮಗ ಸಾವು

ಮಹಾಲಯ ಅಮಾವಾಸ್ಯೆ ದಿನವೇ ಕಾರಿನ ಟೈರ್​ ಬ್ಲಾಸ್ಟ್​ ಆಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಮಹಾಲಯ ಅಮಾವಾಸ್ಯೆ ದಿನವೇ ಕಾರಿನ ಟೈರ್​ ಬ್ಲಾಸ್ಟ್​ ಆಗಿ ತಾಯಿ ಹಾಗೂ ಮಗ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಬುಧವಾರ ಸಂಭವಿಸಿದೆ.

ಗುಣಲಕ್ಷ್ಮಿ(35) ಹಾಗೂ ದೈವಿಕ್ (12) ಮೃತ ದುರ್ದೈವಿಗಳು.

ಇಂದು ನಸುಕಿನ ಜಾವ 4.30ರ ಸುಮಾರಿಗೆ ಮೃತ ಗುಣಲಕ್ಷ್ಮಿ ದಂಪತಿ ತಮ್ಮ ಮಗನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿನ ಟೈರ್​ಗಳು ಬ್ಲಾಸ್ಟ್​ ಆಗಿದ್ದು, ಕಾರು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ ಘಟನೆಯಲ್ಲಿ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ.

ಕಾರು ಚಾಲನೆ ಮಾಡುತ್ತಿದ್ದ ಗುಣಲಕ್ಷ್ಮಿ ಪತಿ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಮೈಸೂರಿನ ಕುವೆಂಪು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com