ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ

ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಹಲವರು ಮನೆಯ ಹೊರಗಡೆ ರಾತ್ರಿ ಮಲಗಿಕೊಂಡಿದ್ದಾರೆ.

ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಲಘು ಭೂಕಂಪನವಾಗಿದ್ದು, ಜನ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com