ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಬಿಎಸ್​ವೈ ಅನುಭವಿ ಮುಖ್ಯಮಂತ್ರಿ: ಮುರುಘಾ ಶ್ರೀಗಳು

ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.
ಮುರುಘಾ ಶ್ರೀಗಳ ಜೊತೆ ಯಡಿಯೂರಪ್ಪ ಮತ್ತು ಬೊಮ್ಮಾಯಿ
ಮುರುಘಾ ಶ್ರೀಗಳ ಜೊತೆ ಯಡಿಯೂರಪ್ಪ ಮತ್ತು ಬೊಮ್ಮಾಯಿ
Updated on

ಚಿತ್ರದುರ್ಗ: ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಕಡಿಮೆ ಸಮಯದಲ್ಲಿ ಹೆಚ್ಚು ಸಾಧನೆ ಮಾಡಿದವರಲ್ಲಿ ಸ್ವಾಮಿ ವಿವೇಕಾನಂದ ಅಂತವರಲ್ಲಿ ಒಬ್ಬರು, ಇಡೀ ವಿಶ್ವವೇ ಅವರನ್ನು ಮೆಚ್ಚುತ್ತದೆ, 12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಸಮಾಜಕ್ಕೆ ಮಾರ್ಗದರ್ಶನ ಮಾಡಲು ವಚನಗಳನ್ನು ಬರೆದರು ಮತ್ತು ಸಮಾನತೆಯ ಸಮಾಜವನ್ನು ನಿರ್ಮಿಸಲು ಚಳುವಳಿಯನ್ನು ಆರಂಭಿಸಿದರು ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅವರನ್ನು ಅದೃಷ್ಟವಂತ ಸಿಎಂ ಮತ್ತು ಬಿಎಸ್ ಯಡಿಯೂರಪ್ಪ ಅನುಭವಿ ಮುಖ್ಯಮಂತ್ರಿ ಎಂದು ಸ್ವಾಮೀಜಿ ಬಣ್ಣಿಸಿದರು. ಬೊಮ್ಮಾಯಿ ಅವರ ಅದೃಷ್ಟ ಮತ್ತು ಯಡಿಯೂರಪ್ಪನವರ ಅನುಭವ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲಿ ಎಂದು ಆಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com