ರಾಜ್ಯದಲ್ಲಿ ಕೊರೋನಾ ಏರಿಳಿತ: 388 ಹೊಸ ಪ್ರಕರಣ ಪತ್ತೆ; 586 ಗುಣಮುಖ, 5 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.

586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,711 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38007ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.32 ರಷ್ಟಿದ್ದು, ಮರಣ ಪ್ರಮಾಣ ಶೇ. 1.28 ರಷ್ಟಿದೆ.
 
ಬೆಂಗಳೂರಿನಲ್ಲಿ 194 ಹೊಸ ಪ್ರಕರಣ ಪತ್ತೆಯಾಗಿದ್ದು, 448 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com