ಬೆಂಗಳೂರು: ಜೈಲಿನಿಂದ ಹೊರಬಂದಿದ್ದ ಕುಖ್ಯಾತ ರೌಡಿಯ ಬರ್ಬರ ಹತ್ಯೆ

ಸಿಲಿಕಾನ್ ಸಿಟಿಯಲ್ಲಿ ಕುಖ್ಯಾತ ರೌಡಿಯೋರ್ವನ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕುಖ್ಯಾತ ರೌಡಿಯೋರ್ವನ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.

ಜೆ.ಸಿ.ಆನಂದ್ (36) ಕೊಲೆಯಾದ ರೌಡಿ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ನೆಲಗದರಹಳ್ಳಿಯಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದೆ. ಬೈಕುಗಳಲ್ಲಿ ಬಂದ ಐದಾರು ಮಂದಿ ಗುಂಪು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಪರಾರಿಯಾಗಿದ್ದಾರೆ.

ಕಳೆದ ಮೂರು ದಿನಗಳಿಂದಷ್ಟೇ ಜೆ.ಸಿ.ಆನಂದ್ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬಂದಿದ್ದರು. ನಿನ್ನೆ ರಾತ್ರಿ 8 ಗಂಟೆಯ ಸುಮಾರು ಬೈಕ್ ನಲ್ಲಿ ಬಂದು ಐದಾರು ಜನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. 

ಈ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ನಡೆದಿದೆ. ಇನ್ನು ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com