ಬೆಂಗಳೂರು: ಶಾಸಕರು, ಪಾಲಿಕೆ ಮುಖ್ಯಸ್ಥರಿಂದ ರಸ್ತೆ ಕಾಮಗಾರಿ ಪರಿಶೀಲನೆ

ಶಾಸಕ ಎಂ ಕೃಷ್ಣಪ್ಪ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
Updated on

ಬೆಂಗಳೂರು: ಶಾಸಕ ಎಂ ಕೃಷ್ಣಪ್ಪ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಕಾಮಗಾರಿ ಪರಿಶೀಲನೆ ಬಳಿಕ ಸಮನ್ವಯ ಸಮಸ್ಯೆಗಳನ್ನು ಪರಿಹರಿಸಲು ಬೆಸ್ಕಾಂ, ಬಿಡಬ್ಲ್ಯೂಎಸ್ಎಸ್'ಬಿ, ಬಿಎಂಆರ್'ಸಿಎಲ್ ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಎಲ್ಲಾ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿ ತಳಮಟ್ಟದಲ್ಲಿ ಸಮಸ್ಯೆಗಳನ್ನು ಬಗರೆಹರಿಸಿಕೊಂಡು ಕೆಲಸ ಮಾಡುವಂಚೆ ಗಾದೂ ರಸ್ತೆ ದುರಸ್ತಿ ಕಾಮಗಾರಿ, ಗುಂಡಿಗಳ ಮುಚ್ಚುವುದು ಹಾಗೂ ಇತರೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ವಾರ್ಡ್ ಮಟ್ಟದಲ್ಲಿ ಎಲ್ಲೆಲ್ಲಿ ನೀರು ಮತ್ತು ಒಳಚರಂಡಿ ಕಾಮಗಾರಿಗಳು ಪೂರ್ಣಗೊಂಡರೂ ಬಿಡಬ್ಲ್ಯೂಎಸ್ಎಸ್'ಬಿಗೆ ಸಾಕ್ಷಿ ಸಮೇತ ಬಿಬಿಎಂಪಿಗೆ ವರದಿ ಸಲ್ಲುವಂತೆ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಎಂ.ಕೃಷ್ಣಪ್ಪ, ವಲಯ ಆಯುಕ್ತರು ಡಾ. ಹರೀಶ್ ಕುಮಾರ್, ಜಂಟಿ ಆಯುಕ್ತರು ರಾಮಕೃಷ್ಣ, ಬೆಸ್ಕಾಂ, ಜಲಮಂಡಳಿ, ಮೆಟ್ರೋ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com