ಓವರ್ ಹೆಡ್ ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ: ಹೊಸ ಪೈಪ್ ಲೈನ್ ಅಳವಡಿಕೆಗೆ ಹೆಚ್.ಡಿ ಕೆ. ಸೂಚನೆ

ಈಗಾಗಲೇ ಮಾಜಿ ಮುಖ್ಯಮಂತ್ರಿಗಳ ಆದೇಶದಂತೆ ಟ್ಯಾಂಕ್ ನೀರು ಸರಬರಾಜಾಗುವ ವಾರ್ಡುಗಳಿಗೆ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಚನ್ನಪಟ್ಟಣದ ಓವರ್ ಹೆಡ್ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಒಟ್ಟಾರೆ ಪೈಪ್ ಲೈನ್ ಬದಲಾವಣೆ ಮಾಡಿ ಹೊಸ ಪೈಪ್ ಲೈನ್ ಅಳವಡಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ಒಂದು ವಾರದಲ್ಲಿ ಹೊಸ ಪೈಪ್ ಲೈನ್ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು. ನಿನ್ನೆ ಪೈಪ್ ಲೈನ್ ನಲ್ಲಿ ಶವದ ಕುರುಹುಗಳು ಪತ್ತೆಯಾಗಿತ್ತು. ಕೂಡಲೇ ಸಿಂಧಗಿ ವಿಧಾನಸಭಾ ಕ್ಷೇತ್ರದ ಪ್ರಚಾರದಲ್ಲಿದ್ದ ಮಾಜಿ ಮುಖ್ಯಮಂತ್ರಿಯವರು ಅಲ್ಲಿಂದಲೇ ಅಧಿಕಾರಿಗಳ ಜತೆ  ಮಾತನಾಡಿ, ಇಡೀ ಪೈಪ್ ಲೈನ್ ಅನ್ನು ಸಂಪೂರ್ಣವಾಗಿ ಪರಿಶೀಲಿಸುವಂತೆ ಅವರು ಸೂಚಿಸಿದ್ದರು.

ಈಗಾಗಲೇ ಮಾಜಿ ಮುಖ್ಯಮಂತ್ರಿಗಳ ಆದೇಶದಂತೆ ಟ್ಯಾಂಕ್ ನೀರು ಸರಬರಾಜಾಗುವ ವಾರ್ಡುಗಳಿಗೆ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com