ಹೊಸಕೋಟೆ: ಪ್ರೇಮ ವೈಫಲ್ಯ, ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!

ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹೊಸಕೋಟೆ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಕೊಲೆ ಮಾಡಿದ ಯುವಕ ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. 

ಹೊಸಕೋಟೆ ತಾಲ್ಲೂಕಿನ ಲಿಂಗೀರಮಲ್ಲಸಂದ್ರ ಗ್ರಾಮದ ಉಷಾ (24) ಕೊಲೆಯಾದ ಯುವತಿ. ಗೋಪಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡ ಯುವಕ. ಇಬ್ಬರು ಒಂದೇ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು.

ಯುವತಿ ತನ್ನ ಅಣ್ಣನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಆತ ಸಂಜೆ ಮನೆಗೆ ಬಂದು ನೋಡಿದಾಗ ಉಷಾ ಸತ್ತು ಬಿದ್ದಿರುವುದು ತಿಳಿದು ಬಂದಿದೆ. ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಆಕೆಯ ಮನೆಯಿಂದ ಸುಮಾರು 10 ಕಿಮೀ ದೂರದ ಕೆರೆಯ ಬಳಿ ಗೋಪಾಲಕೃಷ್ಣನ ಶವ ಪತ್ತೆಯಾಗಿದೆ.

ಉಷಾ ಅಣ್ಣ ಮನೆಯಲ್ಲಿ ಇಲ್ಲದ್ದನ್ನು ತಿಳಿದಿದ್ದ ಗೋಪಾಲಕೃಷ್ಣ ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಮನೆಗೆ ಬಂದಿದ್ದಾನೆ. ಈ ವೇಳೆ ಉಷಾ ಕೆಲಸಕ್ಕೆ ಹೋಗಲು ಸಿದ್ಧಳಾಗಿದ್ದಳು. ಯೂನಿಫಾರ್ಮ್ ನಲ್ಲಿಯೇ ಆಕೆ ಶವವಾಗಿದ್ದಾಳೆ. 

ಪ್ರಾಥಮಿಕ ವಿಚಾರಣೆಯಲ್ಲಿ ಗೋಪಾಲಕೃಷ್ಣ ವಿವಾಹಿತನಾಗಿದ್ದು, ಆತನ ಪತ್ನಿ ಆತನನ್ನು ತೊರೆದಿದ್ದಾಳೆ ಎಂದು ತಿಳಿದುಬಂದಿದೆ.

ಉಷಾಗೆ ಕೆಲಸ ಕೊಡಿಸಲು ಸಹಾಯ ಮಾಡಿದ ಗೋಪಾಲಕೃಷ್ಣ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಆದರೆ ಉಷಾಗೆ ಅವನ ಬಗ್ಗೆ ಆಸಕ್ತಿ ಇರಲಿಲ್ಲ ಮತ್ತು ಸೂಕ್ತ ವರನನ್ನು ಹುಡುಕುತ್ತಿದ್ದಳು. ಇದರಿಂದ ಕುಪಿತಗೊಂಡು ಕೊಲೆ ಮಾಡಿರುವ ಶಂಕೆ ಇದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಅನುಗೊಂಡನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರೆ, ತಿರುಮಲ ಶೆಟ್ಟಿಹಳ್ಳಿ ಪೊಲೀಸರು ಗೋಪಾಲಕೃಷ್ಣ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com