ನಟ ಪುನೀತ್ ರಾಜ್ ಕುಮಾರ್'ಗೆ ಭಾವಪೂರ್ಣ ವಿದಾಯ: ಅಂತಿಮ ಸಂಸ್ಕಾರದಲ್ಲಿ ರವಿಚಂದ್ರನ್, ಸುದೀಪ್, ಯಶ್ ಸೇರಿ ಗಣ್ಯರ ಕಂಬನಿ

ಕನ್ನಡ ಚಿತ್ರರಂಗದ ಪೀತಿಯ 'ಅಪ್ಪು' ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್
Updated on

ಬೆಂಗಳೂರು: ಕನ್ನಡ ಚಿತ್ರರಂಗದ ಪೀತಿಯ 'ಅಪ್ಪು' ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.

'ವೀರ ಕನ್ನಡಿಗ'ನ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ನಡೆಯುತ್ತಿದ್ದು, ರಾಜ್​ ಕುಟುಂಬದ ಸದಸ್ಯರು ಸೇರಿದಂತೆ ಗಣ್ಯಾತಿಗಣ್ಯರ ದಂಡೇ ಸ್ಥಳದಲ್ಲಿ ನೆರೆದಿದೆ.

ನಟ ರವಿಚಂದ್ರನ್, ಸುದೀಪ್, ಯಶ್​, ನಟ ರಿಷಭ್ ಶೆಟ್ಟಿ, ಟೆನಿಸ್ ಕೃಷ್ಣ, ನಟಿ, ಸೃಜನ್ ಲೋಕೇಶ್​, ಸಂಸದೆ ಸುಮಲತಾ, ಯೋಗಿ ಸೇರಿದಂತೆ ಅನೇಕರು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.

ಈ ವೇಳೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​​ವೈ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪುನೀತ್ ಅಂತ್ಯಕ್ರಿಯೆಗೂ ಮುನ್ನ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.

ಕುಶಾಲ ತೋಪು ಹಾರಿಸಿ ಪುನೀತ್​ಗೆ ಗೌರವ ಸಲ್ಲಿಕೆ
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಕೆಲ ಹೊತ್ತಿನಲ್ಲೇ​​ ಪುನೀತ್ ರಾಜ್​​ಕುಮಾರ್​​ ಅಂತ್ಯಕ್ರಿಯೆ ನಡೆಯಲಿದ್ದು, ಕುಶಾಲತೋಪು ಹಾರಿಸಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ.

ಸರ್ಕಾರದ ವತಿಯಿಂದ ವಿಧಿವಿಧಾನಗಳು ಮುಕ್ತಾಯವಾಗಿದ್ದು, ಇದೀಗ ಕುಟುಂಬಸ್ಥರಿಂದ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com