ಕರ್ನಾಟಕ ಮುಕ್ತ ವಿವಿ ಉಪಕುಲಪತಿ ವಿರುದ್ಧ ದೂರು ದಾಖಲು

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ. ಎಸ್ ವಿದ್ಯಾಶಂಕರ್ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿದೆ.
ತಾವರ್ ಚಂದ್ ಗೆಹ್ಲೋಟ್
ತಾವರ್ ಚಂದ್ ಗೆಹ್ಲೋಟ್
Updated on

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ. ಎಸ್ ವಿದ್ಯಾಶಂಕರ್ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್. ದೂರು ದಾರರಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೂರುದಾರರಾದ, ಮಾಜಿ ಉಪಕುಲಪತಿ ಎನ್ ಎಸ್ ರಾಮೇ ಗೌಡ ಮತ್ತು ನಿವೃತ್ತ ಡೀನ್ ಡಾ ಚಂಬಿ ಪುರಾಣಿಕ್-ಶಿಕ್ಷಕರ ದಿನಾಚರಣೆಯಂದು ಕುಲಪತಿಗಳನ್ನು ಭೇಟಿ ಮಾಡಿ, ಕರ್ನಾಟಕ ಮುಕ್ತ ವಿವಿ ಉಪಕುಲಪತಿ ಡಾ. ವಿದ್ಯಾಶಂಕರ್ ವಿರುದ್ಧ ಗಂಭೀರ ಆರೋಪಗಳನ್ನು ಪಟ್ಟಿ ಮಾಡಿ 33 ಪುಟಗಳಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಗೌಡ ಮತ್ತು ಪುರಾಣಿಕ್, ಅನಗತ್ಯವಾಗಿರುವ ನಿರ್ಮಾಣ ಕೈಗೊಳ್ಳುವ ಮೂಲಕ ವಿದ್ಯಾಸಾಗರ್ ವಿಶ್ವ ವಿದ್ಯಾನಿಲಯಕ್ಕೆ400 ಕೋಟಿ ರು ಹಣ ಹೊರೆಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಶ್ವ ವಿದ್ಯಾನಿಲಯ ಒಮ್ಮೆಗೆ ಅನೇಕರಿಂದ ಮೆಚ್ಚುಗೆ ಪಡೆದಿದೆ. ಆದರೆ ಇಂದು ಆ ಪ್ರಶಂಸೆ ಸಾಯುತ್ತಿದೆ. ಇದು ಹೀಗೆ ಮುಂದುವರಿದರೇ ಶೀಘ್ರದಲ್ಲಿ ವಿವಿಗೇ ಮರಣೋತ್ತರ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com