ಬೆಂಗಳೂರು: ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ರೈಲ್ವೆ ಪೊಲೀಸ್ ಎಡಿಜಿಪಿ ಭಾಸ್ಕರ್ ರಾವ್ ಸೇವೆಯಿಂದ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ವೈಯಕ್ತಿಕ ಕಾರಣದಿಂದ ಸ್ವಯಂ ನಿವೃತ್ತಿ ಪಡೆಯುತ್ತಿದ್ದು, ತಮ್ಮ ಅರ್ಜಿ ಪರಿಗಣಿಸುವಂತೆ ಕೋರಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಮೂಲಗಳು ಹೇಳಿವೆ.
1990ನೇ ಐಪಿಎಸ್ ಬ್ಯಾಚ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್, ರಾಜ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿದ್ದರು.
ಸ್ವಯಂ ನಿವೃತ್ತಿ ಸಿಗುತ್ತಿದ್ದಂತೆ ಭಾಸ್ಕರ್ ರಾವ್ ರಾಜಕೀಯ ಪ್ರವೇಶಿಸುವ ಸಾಧ್ಯತೆಯಿದೆ. ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಮಾತುಗಳು ಕೇಳಿಬರುತ್ತಿವೆ. ಭಾಸ್ಕರ್ ರಾವ್ ಅವರಿಗೆ ಕಾಂಗ್ರೆಸ್ ಅಥವಾ ಎಎಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.
Advertisement