ಭಾರತ್ ಬಂದ್: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ

ಭಾರತ್ ಬಂದ್ ಹಿನ್ನೆಲೆ, ಹಾಗೂ ಕೇಂದ್ರ ಕೃಷಿಸುಧಾರಣಾ  ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ನಗರ ವಿವಿ
ಬೆಂಗಳೂರು ನಗರ ವಿವಿ
Updated on

ಬೆಂಗಳೂರು: ಭಾರತ್ ಬಂದ್ ಹಿನ್ನೆಲೆ, ಹಾಗೂ  ಕೇಂದ್ರ ಕೃಷಿಸುಧಾರಣಾ  ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿರುವುದಾಗಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವಿವಿ ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು. 

ಆದರೆ, ಭಾರತ ಬಂದ್ ಕಾರಣ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿವಿ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com