ಕೆಎಂಎಫ್'ಗೆ ಗೋಶಾಲೆ ನಿರ್ವಹಣೆ ಜವಾಬ್ದಾರಿ ನೀಡಿದ ರಾಜ್ಯ ಸರ್ಕಾರ!

ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಸ್ಥಾಪಿಸಲಾಗುವ ಗೋಶಾಲೆಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ನಿಯಮಿತ (ಕೆಎಂಎಫ್) ನಿರ್ವಹಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 
ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಸ್ಥಾಪಿಸಲಾಗುವ ಗೋಶಾಲೆಗಳನ್ನು ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ ನಿಯಮಿತ (ಕೆಎಂಎಫ್) ನಿರ್ವಹಣೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ವತಿಯಿಂದ ಆಯೋಜಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ತೆರೆಯಲಾಗುವುದು. ಆರಂಭಕ್ಕೆ ಬೇಕಾದ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗುತ್ತದೆ. ನಿರ್ವಹಣೆಯನ್ನು ಪಶುಸಂಗೋಪನೆ ಇಲಾಖೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗೋಶಾಲೆ ಪುಣ್ಯದ ಕೆಲಸ ಅದನ್ನು ನಾವೆಲ್ಲ ಸೇರಿ ಮಾಡಬೇಕು. ಯಾವ ಜಿಲ್ಲೆಯಲ್ಲಿ ನೀರಾವರಿ, ಹಸಿರು ಇದೆ ಅಲ್ಲಿ ಗೋವುಗಳನ್ನು ಹೆಚ್ಚು ರೈತರಿಗೆ ನೀಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ಮುಂದೆ ಆರಂಭಿಸಲಾಗುವುದು ಎಂದು ತಿಳಿಸಿದರು. 

ಇದೇ ವೇಳೆ ಹಾಲಿನ ದರ ಹೆಚ್ಚಳ ಮಾಡುವ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಈ ಕುರಿತು ನಾನು ಯಾವುದೇ ಆಶ್ವಾಸನೆ ಕೊಡುವುದಿಲ್ಲ. ಕೊಡಲು ಬರುವುದಿಲ್ಲ. ನಾಯಕರಾದ ಯಡಿಯೂರಪ್ಪ ಪ್ರೋತ್ಸಾಹ ಧನ ನೀಡಿದ್ದರು. ಕೋವಿಡ್ ಸಂದರ್ಭದಲ್ಲಿ 1250 ಕೋಟಿ ಸಹಾಯ ಮಾಡಲಾಗಿದೆ. ಇದಕ್ಕೆ ಬಿಎಸ್ ವೈ ಗೆ ಅಭಾರಿಯಾಗಿದ್ದೇನೆ. ಬಿಎಸ್ ವೈ ಅವರ ಯೋಜನೆ ಮುಂದುವರೆಸಲಾಗುವುದು. ಕೆಎಂಎಫ್ ಗೆ ಈ ವರ್ಷ 50 ಕೋಟಿ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.

ಲಾಭನಷ್ಟ ಲೆಕ್ಕಾಚಾರ ಮಾಡದೇ ಗೋರಕ್ಷಣೆ ಮಾಡೋಣ
ಗೋ ರಕ್ಷಣೆ ಲಾಭ ನಷ್ಟದ ಲೆಕ್ಕಾಚಾರವಿಲ್ಲದೇ ಮಾಡಬೇಕು. ಗೋವಿನ ಋಣ ತೀರಿಸಬೇಕು. ಹಾಲು ನಿರಂತರವಾಗಿ ಅವಶ್ಯಕತೆ ಇರುವಂತಹ ವಸ್ತು. ಹಾಲು ಕೊಡುವ ಗೋವಿನ ರಕ್ಷಣೆ ಕೂಡ ಅತ್ಯವಶ್ಯಕ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. 

ಗೋವುಗಳು ಹಾಲು ಕೊಡುವುದನ್ನು ನಿಲ್ಲಿಸಿದಾಗಲೂ ಅದರ ರಕ್ಷಣೆ ನಮ್ಮ ನೈತಿಕ ಜವಾಬ್ದಾರಿ. ಗೋವನ್ನು ಕಸಾಯಿಖಾನೆಗೆ ನೀಡಲು ನಿಷೇದ ಹೇರಿ ಕಾನೂನು ರಚಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಿಸಲು ಬೇಕಾದ ಅನುದಾನ ನೀಡಲಾಗುವುದು. ಸರ್ಕಾರ ಗೋಶಾಲೆ ನಿರ್ಮಾಣ ಮಾಡುತ್ತದೆ. ಅದರ ನಿರ್ವಹಣೆ, ರಕ್ಷಣೆಯ ಜವಾಬ್ದಾರಿ ಕೆಎಂಎಫ್ ತೆಗೆದುಕೊಳ್ಳಬೇಕು. ಲಾಭವೂ ಇಲ್ಲದ ನಷ್ಟವೂ ಇಲ್ಲದ ಆಧಾರದ ಮೇಲೆ ಗೋ ರಕ್ಷಣೆ ಮಾಡಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com