ಬೆಂಗಳೂರು: ಎಂಜಿನಿಯರಿಂಗ್ ದೋಷಗಳೇ ರಾಜ್ಯದಲ್ಲಿ ಎದುರಾದ ಭೂಕುಸಿತಕ್ಕೆ ಕಾರಣ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ಸರ್ಕಾರಕ್ಕೆ ತಿಳಿಸಿದೆ.
ಕಳೆದ 3 ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಅಧ್ಯಯನ ನಡೆಸಲು ಉದ್ದೇಶಿಸಿ ರಚಿಸಿದ್ದ ಸಮಿತಿ ತನ್ನ ಅಂತಿಮ ವರದಿಯನ್ನು ಮುಖ್ಯಮಂತ್ರಿಗಳಿಗೆ ಗೃಹ ಕಚೇರಿಯಲ್ಲಿ ಗುರುವಾರ ಸಲ್ಲಿಸಿತು.
ವರದಿಯಲ್ಲಿ ಎಂಜಿನಿಯರಿಂಗ್ ದೋಷಗಳೇ ರಾಜ್ಯದಲ್ಲಿ ಎದುರಾದ ಭೂಕುಸಿತಕ್ಕೆ ಕಾರಣ ಎಂದು ಹೇಳಿದೆ ಎಂದು ತಿಳಿದುಬಂದಿದೆ. ಅಲ್ಲದೆ. ನಾಡಿನಲ್ಲಿ ಘಟಿಸುತ್ತಿರುವ ಭೂ ಕುಸಿತದ ಸಮಗ್ರ ನಿಯಂತ್ರಣ ಸಂಬಂಧ ಕರ್ನಾಟಕ ರಾಜ್ಯ ಅವಘಡ ನಿಯಂತ್ರಣ ಪ್ರಾಧಿಕಾರದ ನೇತೃತ್ವದಲ್ಲಿ ಸೂಕ್ತ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸಲಹೆ ನೀಡಿದೆ.
ಸಮಿತಿಯಲ್ಲಿ ಒಬ್ಬರಾಗಿರುವ ಪ್ರೊ.ಟಿವಿ.ರಾಮಚಂದ್ರ ಅವರು ಮಾತನಾಡಿ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭೂಕುಸಿತವು ರೆಸಾರ್ಟ್ ಸೇರಿದಂತೆ ಇತರೆ ಪ್ರವಾಸಿ ತಾಣಗಳನ್ನು ಹೊಂದಿರುವ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲೂ ಸಂಭವಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಈ ನಡುವೆ ಅಧ್ಯಯಯನ ನಡೆಸಲು ಸಮಿತಿಯು ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ-ಆಗಸ್ಟ್ ತಿಂಗಳಿನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭವಿಷ್ಯದಲ್ಲಿ 7 ಜಿಲ್ಲೆಯ 23 ತಾಲೂಕುಗಳಲ್ಲಿ ಭೂ ಕುಸಿತವಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.
ಸಮಿತಿಯ ಸಲಹೆಗಳು ಇಂತಿವೆ...
Advertisement