ಯಾದಗಿರಿ: ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದು ಭೀಕರ ಅಪಘಾತ, ಬಾಲಕಿ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ

ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿಯಿಂದು ಹರಿದ ಪರಿಣಾಮ ಬಾಲಕಿಯೊಬ್ಬಳು ದುರ್ಮರಣಕ್ಕೀಡಾಗಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಯಾದಗಿರಿ ಜಿಲ್ಲೆಗುರುಮಠಕಲ್ ನ ಬೋರಬಂಡ ಎಂಬಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಯಾದಗಿರಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿಯಿಂದು ಹರಿದ ಪರಿಣಾಮ ಬಾಲಕಿಯೊಬ್ಬಳು ದುರ್ಮರಣಕ್ಕೀಡಾಗಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಯಾದಗಿರಿ ಜಿಲ್ಲೆಗುರುಮಠಕಲ್ ನ ಬೋರಬಂಡ ಎಂಬಲ್ಲಿ ನಡೆದಿದೆ.

ಪ್ರಯಾಣಿಕರು ಗುರುಮಠಕಲ್ ಗೆ ತೆರಳುವುದಕ್ಕಾಗಿ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಏಕಾಏಕಿ ಬಂದ ಸಿಮೆಂಟ್ ಲಾರಿ ಅವರ ಮೇಲೆ ನುಗ್ಗಿದೆ. ಈ ವೇಳೆ ಮೋನಿಕಾ ಎಂಬ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಆಕೆಯ ದೇಹ ಛಿದ್ರ ಛಿದ್ರವಾಗಿದೆ.

ಸಕಾಲದಲ್ಲಿ ಅಂಬ್ಯುಲೆನ್ಸ್ ಸಿಕ್ಕದ ಕಾರಣ 112 ಮತ್ತು ಹೈವೆ ಪ್ಯಾಟ್ರೋಲಿಂಗ್ ವಾಹನಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಲಾರಿ ಚಾಲಕನನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com