ಮಂಗಳೂರು: ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವಾಹನ ಸವಾರ ಬಸ್ಸಿನಡಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಮೃತರನ್ನು ಅತ್ತಾವರ ನಿವಾಸಿ ಧೀಮಂತ್(30) ಎಂದು ಗುರುತಿಸಲಾಗಿದೆ.
ಮೃತರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್ಸಿನಡಿಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಧೀಮಂತ್ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement