ಧಾರವಾಡ: ನಸುಕಿನ ವೇಳೆ ರೋಜಾ ಮುಗಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮುಲ್ಲಾ ದಾಬಾ ಬಳಿ ನಡೆದ ಅಪಘಾತದಲ್ಲಿ ಮಾಜಖಾರ ಪಠಾಣ, ಮುಜಭೀಲ್ ಅಧೋನಿ ಎನ್ನುವ ಯುವಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ನಡೆದ ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement