ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಔಷಧಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

ಇದಕ್ಕೆ ಸರಿಯಾಗಿ ಪರಿಸ್ಥಿತಿಯ ಲಾಭ ಮಾಡಿಕೊಳ್ಳಲು ಹಲವರು ಮುಂದಾಗಿದ್ದು ಕಾಳಸಂತೆಯಲ್ಲಿ ಔಷಧ ಮಾರಾಟವಾಗುತ್ತಿದೆ. ಕೊರೋನಾ ರೋಗಿಗಳಿಗೆ ಕೊಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು ಪ್ರಕರಣ ಬೇಧಿಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಮೂವರನ್ನು ಬಂಧಿಸಿದ್ದಾರೆ.

ಈ ಮೂವರು ರೆಮೆಡಿಸಿವಿರ್ ನ್ನು ಅಕ್ರಮವಾಗಿ ಸಂಗ್ರಹಿಸಿ ನಿಗದಿತ ಬೆಲೆಗಿಂತ ಹೆಚ್ಚು ಪ್ರತಿ ಲಸಿಕೆಗೆ 10 ಸಾವಿರದ 500 ರೂಪಾಯಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿಗಳನ್ನು ರಾಜೇಶ್, ಸಾಕೀಬ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದ್ದು, ರಾಜೇಶ್ ಮತ್ತು ಸಾಕೀಬ್ ಗುರುಶ್ರೀ ಮೆಡಿಕಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರ ವಿರುದ್ಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಮತ್ತು ಮತ್ತೊಬ್ಬ ಆರೋಪಿ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com