ಮಡಿಕೇರಿ: ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಭಾನುವಾರ ನಡೆದ ಘಟನೆಯಲ್ಲಿ ಸುಂಟಿಕೊಪ್ಪದ ಶಶಿಕುಮಾರ್ (32) ಮತ್ತು ದಿವ್ಯ (20) ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ವೀಕೆಂಡ್ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಆಗಮಿಸಿದ್ದು ಈ ವೇಳೆ ದಿವ್ಯಾ ಆಯತಪ್ಪಿ ಜಲಪಾತಕ್ಕೆ ಬಿದ್ದಿದ್ದಾಳೆ. ಈ ವೇಳೆ ನೀರಿನಲ್ಲಿ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ತೆರಳಿದ ಶಶಿಕುಮಾರ್ ಸಹ ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ
Advertisement