ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವು

ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.
ಮೃತ ದಿವ್ಯಾ ಹಾಗೂ ಶಶಿಕುಮಾರ್
ಮೃತ ದಿವ್ಯಾ ಹಾಗೂ ಶಶಿಕುಮಾರ್

ಮಡಿಕೇರಿ: ಜಲಪಾತಕ್ಕೆ ಬಿದ್ದು ಇಬ್ಬರು ದಾರುಣ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತದಲ್ಲಿ ನಡೆದಿದೆ.

ಭಾನುವಾರ ನಡೆದ ಘಟನೆಯಲ್ಲಿ ಸುಂಟಿಕೊಪ್ಪದ ಶಶಿಕುಮಾರ್​ (32) ಮತ್ತು ದಿವ್ಯ (20) ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ 9.30 ಗಂಟೆ ಸುಮಾರಿಗೆ ವೀಕೆಂಡ್​ ಹಿನ್ನೆಲೆಯಲ್ಲಿ ಆರು ಜನರ ತಂಡ ಜಲಪಾತಕ್ಕೆ ಆಗಮಿಸಿದ್ದು ಈ ವೇಳೆ ದಿವ್ಯಾ ಆಯತಪ್ಪಿ ಜಲಪಾತಕ್ಕೆ ಬಿದ್ದಿದ್ದಾಳೆ. ಈ ವೇಳೆ ನೀರಿನಲ್ಲಿ ಬೀಳುತ್ತಿದ್ದ ದಿವ್ಯಾಳನ್ನು ರಕ್ಷಿಸಲು ತೆರಳಿದ ಶಶಿಕುಮಾರ್ ಸಹ ಸಾವಿಗೀಡಾಗಿದ್ದಾರೆ.

<strong> ಮಲ್ಲಳ್ಳಿ ಜಲಪಾತ</strong>
 ಮಲ್ಲಳ್ಳಿ ಜಲಪಾತ

ಘಟನಾ ಸ್ಥಳಕ್ಕೆ ಸೋಮವಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com