social_icon

ಕೋವಿಡ್-19: ರಾಜ್ಯದಲ್ಲಿ ಇನ್ನು ಮುಂದೆ ಆಮ್ಲಜನಕ ಕೊರತೆ ಎದುರಾಗುವುದಿಲ್ಲ!

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್‍ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 

Published: 21st April 2021 08:24 AM  |   Last Updated: 21st April 2021 08:24 AM   |  A+A-


file photo

ಸಂಗ್ರಹ ಚಿತ್ರ

Posted By : manjula
Source : The New Indian Express

ಬೆಂಗಳೂರು: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಜೆಎಸ್‍ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ಒಪ್ಪಿಗೆ ನೀಡಿದ್ದು, ಇದರಿಂದ ಇನ್ನು ಮುಂದೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ಎದುರಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 

ಮಂಗಳವಾರ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಸಚಿವ ಜಗದೀಶ್ ಶೆಟ್ಟರ್ ಅವರು, ಜೆಎಸ್‍ಡಬ್ಲ್ಯೂ ಸ್ಟೀಲ್ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ನೇತೃತ್ವದ ಪ್ರತಿನಿಧಿಗಳ ಸಭೆ ಮಂಗಳವಾರ ನಡೆಯಿತು. 

ಸಭೆ ಬಳಿಕ ಜೆಎಸ್‍ಡಬ್ಲ್ಯೂ ಸ್ಟೀಲ್ ಕಂಪನಿ (ಜಿಂದಾಲ್) ರಾಜ್ಯಕ್ಕೆ ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಕೆ ಮಾಡಲು ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ. 

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಪರಿಣಾಮವಾಗಿ ಅಪಾರ ಸಂಖ್ಯೆಯ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ದಾಖಲಾದ ರೋಗಿಗಳಿಗೆ ಆಮ್ಲಜನಕದ ಪೂರೈಕೆಯ ಕೊರತೆಯು ಗಂಭೀರ ಸ್ಥಿತಿಯಲ್ಲಿದೆ ಎಂದು ಸಭೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಲಾಯಿತು.

ಆಮ್ಲಜನಕದ ಪೂರೈಕೆಯ ಕೊರತೆಯಿಂದ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಏರುಪೇರು ಉಂಟಾಗಿದೆ. ರಾಜ್ಯದಲ್ಲಿ ಹದಗೆಟ್ಟ ಪರಿಸ್ಥಿತಿಯ ಮಧ್ಯೆ ಸಚಿವ ಮುರುಗೇಶ್ ನಿರಾಣಿ ಅವರು ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಸಭೆಯಲ್ಲಿ ಮುಂದಿಟ್ಟರು.

ಉಕ್ಕಿನ ಉತ್ಪಾದನೆಯಲ್ಲಿ ಅವುಗಳ ಬಳಕೆಗಾಗಿ ತಮ್ಮ ಸಂಸ್ಥೆಗಳಲ್ಲಿ ದ್ರವೀಕೃತ ಆಮ್ಲಜನಕವನ್ನು ಉತ್ಪಾದಿಸುವ ಹಲವಾರು ಉಕ್ಕಿನ ಕಂಪನಿಗಳ ಪ್ರತಿನಿಧಿಗಳೊಂದಿಗೆ ಅವರು ಸಭೆ ನಡೆಸಿ ರಾಜ್ಯದ ವಸ್ತು ಸ್ಥಿತಿಯನ್ನು ಸಭೆಯ ಮುಂದಿಟ್ಟರು. 

ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯನ್ನು ಪರಿಹರಿಸಲು ಬೃಹತ್ ಪ್ರಮಾಣದಲ್ಲಿ ಆಮ್ಲಜನಕವನ್ನು ಉತ್ಪಾದಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.

ಸಭೆಯಲ್ಲಿ ಹಾಜರಿದ್ದ ಜೆಎಸ್‍ಡಬ್ಲ್ಯು ಸ್ಟೀಲ್‍ನ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ಅವರು, ದಿನಕ್ಕೆ 400 ಟನ್ ದ್ರವೀಕೃತ ಆಮ್ಲಜನಕವನ್ನು ಪೂರೈಸಲು ಸಮ್ಮತಿಸಿದರು. 

ಈ ಬಿಕ್ಕಟ್ಟನ್ನು ನಿಭಾಯಿಸಲು ಕರ್ನಾಟಕ ಸರ್ಕಾರಕ್ಕೆ ಎಲ್ಲ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ನಮ್ಮ ಕಂಪನಿಗಳ ಬದ್ಧತೆ ಕರ್ನಾಟಕದ ಕಡೆಗೆ. ಬೇಡಿಕೆ ಎದುರಾದರೆ ನಾವು ಹೆಚ್ಚು ಆಮ್ಲಜನಕವನ್ನು ಪೂರೈಸಲು ಸಿದ್ಧರಾಗಿದ್ದೇವೆ ಎಂದು ನೋವಲ್ ಸಭೆಯ ನಂತರ ಹೇಳಿದರು.


Stay up to date on all the latest ರಾಜ್ಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp