ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ

ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.
ಕಾವೇರಿ ನದಿ
ಕಾವೇರಿ ನದಿ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮೃತಪಟ್ಟವರ ಚಿತಾಭಸ್ಮ ಹಾಗೂ ಇನ್ನಿತರೆ ವಸ್ತುಗಳನ್ನು ಬಿಡುವುದಕ್ಕೆ ರಾಜ್ಯ ಸರ್ಕಾರ ನಿಷೇಧ ವಿಧಿಸಿದೆ.

ಕೋವಿಡ್‌ನಿಂದಾಗಿ ಸಾವುಗಳು ಹೆಚ್ಚಾಗುತ್ತಿದ್ದಂತೆ, ಶ್ರೀರಂಗಪಟ್ಟಣದ ಪ್ರಸಿದ್ಧ ಪಶ್ಚಿಮವಾಹಿನಿ ಮತ್ತಿತರೆಡೆಗಳಲ್ಲಿ ಮೃತರ ಚಿತಾಭಸ್ಮವನ್ನು ಬಿಡಲು ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವುದನ್ನು ಗಮನಿಸಿ ಈ ಆದೇಶ ನೀಡಲಾಗಿದೆ.

ಕೋವಿಡ್ 19 ರ ಹರಡುವಿಕೆಯ ಬಗ್ಗೆ ಸ್ಥಳೀಯರು ಭಯ ವ್ಯಕ್ತಪಡಿಸಿದ್ದರಿಂದ ರಾಜ್ಯ ಮತ್ತು ನೆರೆ ಜಿಲ್ಲೆ, ನೆರೆ ರಾಜ್ಯಗಳ ಜನ ಕಾವೇರಿಯಲ್ಲಿ ಚಿತಾಭಸ್ಮವನ್ನು ಬಿಡುವುದಕ್ಕೆ ತಾಲ್ಲೂಕು ಆಡಳಿತವು ನಿಷೇಧ ಹೇರಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎಂ ವಿ ರೂಪಾ ತಿಳಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com