ಬೆಂಗಳೂರು: ಬಿಡಿಎ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನೂತನ ಆಯುಕ್ತರಿಗೆ ಶುಭ ಕೋರಿ ಮಾತನಾಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಪ್ರಾಧಿಕಾರ ಸಾರ್ವಜನಿಕರ ಸೇವೆಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸ್ನೇಹಿ ಸಂಸ್ಥೆಯನ್ನಾಗಿ ಮಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.
ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗಾಗಿ ಬಿಡಿಎಗೆ ಅಲೆಯದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ನೂತನ ಆಯುಕ್ತ ರಾಜೇಶ್ ಗೌಡ ಮಾತನಾಡಿ, ಸಾರ್ವಜನಿಕರಿಗಾಗಿ ಇರುವ ಸಂಸ್ಥೆಯ ಉನ್ನತಿಗೆ ಕೆಲಸ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಡಿಎನ ಹಲವಾರು ಅಧಿಕಾರಿಗಳು ಇದ್ದರು.
Advertisement